ನನಗೆ ಹಿರಿ, ಕಿರಿಯರ ಸಹಕಾರ ಸಿಗುವ ವಿಶ್ವಾಸವಿದೆ: ಡಿಕೆಶಿ

84

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಕ್ಷಕ್ಕಾಗಿ ನಾನು ದುಡಿದ್ದಿದ್ದೇನೆ. ಹೀಗಾಗಿ ನನಗೂ ಹಿರಿ, ಕಿರಿಯರ ಸಹಕಾರ ಸಿಗುವ ವಿಶ್ವಾಸವಿದೆ. ಈ ಮೂಲಕ ತಾವು ಮುಂದಿನ ಮುಖ್ಯಮಂತ್ರಿ ಆಗುವ ಕುರಿತು ಮುನ್ಸೂಚನೆ ನೀಡಿದ್ದಾರೆ.

ನನಗೆ ಜವಾಬ್ದಾರಿ ಕೊಟ್ಟ ದಿನದಿಂದ ಸರಿಯಾಗಿ ಮಲಗಿಲ್ಲ. ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿರ್ವಹಿಸುವುದು ಸಾಧ್ಯವಿಲ್ಲ ಎಂದು ಹೇಳಿದಾಗ ಸೋನಿಯಾ ಗಾಂಧಿ ಅವರು ನನಗೆ ಜವಾಬ್ದಾರಿ ಕೊಟ್ಟರು. ಎಲ್ಲರೂ ನನಗೆ ಸಹಕಾರ ಕೊಡುತ್ತಾರೆ ಎಂದರು.

ಸದಾಶಿವ ನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾತನಾಡಿದರು. ಅವರೊಂದಿಗೆ ಸಾಕಷ್ಟು ವಿಚಾರಗಳ ಕುರಿತು ಚರ್ಚೆ ನಡೆಸಿದರು. ಸಿಎಂ ಯಾರು ಅನ್ನೋದರ ಕುರಿತು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.




Leave a Reply

Your email address will not be published. Required fields are marked *

error: Content is protected !!