ನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಬೊಮ್ಮಾಯಿ

143

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಈ ಸ್ಥಿತಿಯಲ್ಲಿ ಅದನ್ನು ಬಯಸೋಕೆ ಹೋಗುತ್ತಿಲ್ಲ. ಅಧಿವೇಶನ ಕರೆದ ಕೂಡಲೇ ವಿಪಕ್ಷ ನಾಯಕನ ಆಯ್ಕೆ ನಡೆಯುತ್ತೆ ಅಂತಾ ಮಾಜಿ ಸಿಎಂ ಬೊಮ್ಮಾಯಿ ಹೇಳಿದರು.

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋಲಿನ ಬಗ್ಗೆ ರಾಷ್ಟ್ರೀಯ ನಾಯಕರು ಬೇಸರ ಮಾಡಿಕೊಳ್ಳುವ ಅವಶ್ಯಕತೆಯಿಲ್ಲ. ಸೋಲಿನ ಹೊಣೆ ನಾನೇ ಹೊತ್ತಿದ್ದೇನೆ. ಎಲ್ಲರ ಸೋಲಿಗೆ ನಾನೇ ಕಾರಣ ಎಂದ ಮೇಲೆ ಅವರ ಆರೋಪದ ಬಗ್ಗೆ ಉತ್ತರಿಸುವ ಪ್ರಶ್ನೆಯೇ ಇಲ್ಲ.

ಗ್ಯಾರೆಂಟಿಗಳ ಹೆಸರಲ್ಲಿ ಒಂದು ಕಡೆ ಕೊಟ್ಟು ಮತ್ತೊಂದು ಕಡೆ ಕಿತ್ತುಕೊಳ್ಲೋದು ನಡೀತಿದೆ. ಫ್ರೀ ಬಸ್ ಮೂಲಕ ಆರಂಭದ ಶೂರತ್ವ ತೋರಿಸಿದೆ. ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ, ಶಾಲಾ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ, ಉಚಿತ ಬಸ್ ಕಾರಣಕ್ಕೆ ತುಂಬಿ ತುಳುಕುತ್ತಿವೆ. ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಅಂತ ಹೇಳಿದರು.


TAG


Leave a Reply

Your email address will not be published. Required fields are marked *

error: Content is protected !!