ಪ್ರಜಾಸ್ತ್ರ ಸುದ್ದಿ
ಮಂಡ್ಯ: ಮಂಡ್ಯ ಬಿಟ್ಟು ನಾನು ಬೇರೆ ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ. ಇಲ್ಲಿನ ಜನರ ಋಣ ತೀರಿಸಲು ಇಲ್ಲಿಯೇ ಇರುತ್ತೇನೆ ಎಂದಿದ್ದಾರೆ.
ಚುನಾವಣೆ ಹತ್ತಿರ ಬಂದಾಗ ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಕೆಲವರು ಕ್ರೆಡಿಟ್ ಗಾಗಿ ಕೆಲಸ ಮಾಡುತ್ತಾರೆ. ನನಗೆ ಯಾವುದೇ ಕ್ರೆಡಿಟ್ ಬೇಕಾಗಿಲ್ಲ. ಎಲ್ಲ ಕೆಲಸ ಅವರೆ ಮಾಡಿಸುತ್ತಾರೆ. ಈ ಕುರಿತು ನನಗೆ ಯಾವುದೇ ಬೇಸರವಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಂಸದ ಪ್ರತಾಪ ಸಿಂಹ ವಿರುದ್ಧ ಕಿಡಿ ಕಾರಿದರು.