ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಾನು ಎಡಗೈ ಸಮಾವೇಶದಲ್ಲಿ ಭಾಗವಹಿಸಿದ್ದೆ. ಅಲ್ಲಿ ಮಾತನಾಡಿದಾಗ ದಲಿತರು ಅನ್ನೋ ಪದ ಬಳಸಿಲ್ಲ. ಕಾರಜೋಳ, ಜಿಗಜಿಣಗಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಕೊಡದ ಪಕ್ಷ ಸೇರಿದ್ದಾರೆ ಅಂತಾ ಹೇಳಿದ್ದೇನೆ. ಹೊಟ್ಟೆ ಪಾಡಿಗಾಗಿ ದಲಿತರು ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಹೇಳಿಲ್ಲವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾನು ಆರ್ ಎಸ್ಎಸ್ ವಿರುದ್ಧ ಮಾತನಾಡುತ್ತೇನಲ್ಲ. ಅದಕ್ಕಾಗಿ ಬಿಜೆಪಿಯವರು ಇದಕ್ಕಾಗಿ ಹೇಳಿ ಪ್ರತಿಭಟನೆ ಮಾಡಿಸುತ್ತಿದ್ದಾರೆ. ದಲಿತರು ಆರ್ಥಿಕವಾಗಿ, ಸಾಮಾಜಿಕವಾಗಿ ಬಲಿಷ್ಠರಾಗಬೇಕು ಅನ್ನುವವರಲ್ಲಿ ಮೊದಲಿಗ ನಾನು ಅಂತಾ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.