ನಾನೇ ಧಾರವಾಡ-71ರ ಕಾಂಗ್ರೆಸ್ ಅಭ್ಯರ್ಥಿ: ಇಸ್ಮಾಯಿಲ್ ತಮಟಗಾರ

230

ಪ್ರಜಾಸ್ತ್ರ ಸುದ್ದಿ

ಧಾರವಾಡ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನೇ ಧಾರವಾಡ-71 ಕ್ಷೇತ್ರದ ಅಭ್ಯರ್ಥಿ ಎಂದು ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಹೇಳಿದ್ದಾರೆ. ಮಾಜಿ ಸಚಿವರಾದ ವಿನಯ ಕುಲಕರ್ಣಿಯವರು ಈಗ ರಾಜ್ಯಮಟ್ಟದ ನಾಯಕರು. ಅವರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕರೂ ಗೆಲ್ಲುತ್ತಾರೆ. ಆದರೆ ನಾನು ಕೇವಲ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಾಯಕನಾಗಿದ್ದೇನೆ ಎಂದರು.

ನಗರದ ಮಂದಾರ ಹೋಟೆಲ್ ಸಭಾಭವನದಲ್ಲಿ ಗುರುವಾರ ನಡೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಮೈನಾರಿಟಿ ಕೋಟಾದಡಿ ಕಾಂಗ್ರೆಸ್ ಪಕ್ಷದ ನಾಯಕರು ನನಗೆ ಟಿಕೆಟ್ ನೀಡುತ್ತಾರೆ ಅನ್ನೋ ಸಂಪೂರ್ಣ ವಿಶ್ವಾಸವಿದೆ. ಹಾಲಿ ಶಾಸಕ ಅಮೃತ ದೇಸಾಯಿಯವರ ಬಗ್ಗೆ ಜನರು ತೆಗಳುತ್ತಿದ್ದು, ಅವರ ವಿರುದ್ಧ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನಲ್ಲಿ ನಡೆಯುವ ಮಾಜಿ ಸಚಿವರಾದ ವಿನಯ ಕುಲಕರ್ಣಿಯವರ ಜನ್ಮ ದಿನದ ಕಾರ್ಯಕ್ರಮದಲ್ಲಿ ಚಿತ್ರನಟ ದರ್ಶನ ಆಗಮಿಸುತ್ತಿದ್ದಾರೆ. ಈ ಕಾರಣಕ್ಕೆ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಆದರೆ ನನಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ. ನಾನು ಅವರ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಇಸ್ಮಾಯಿಲ್ ತಮಟಗಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!