ಪ್ರಜಾಸ್ತ್ರ ಸುದ್ದಿ
ಮಂಗಳೂರು: ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಂರ ವೋಟು ಬೇಡ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಈ ರೀತಿ ಹೇಳಿಕೆ ನೀಡಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಮುಸ್ಲಿಂರ ವೋಟು ಬೇಡ. ಹಿಂದೂಗಳ ವೋಟು ಸಾಕು. ಇದನ್ನು ಬಹಿರಂಗವಾಗಿಯೇ ಹೇಳುತ್ತಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.