ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಎರಡ್ಮೂರು ದಿನಗಳಲ್ಲಿ ಬಂಧಿಸಲಾಗುವುದು ಎಂದು, ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮುಂದಿನ 10 ದಿನಗಳಲ್ಲಿ ಅವರನ್ನು ಬಂಧಿಸಲಾಗುತ್ತೆ ಎಂದು ನಾವು ಕೇಳಿದ್ದೇವು. ಆದರೆ, ಎರಡ್ಮೂರು ದಿನಗಳಲ್ಲಿ ಬಂಧನವಾಗುತ್ತೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಕೇಜ್ರಿವಾಲ್ ಹಾಗೂ ಸಿಸೋಡಿಯಾ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ತಯಾರಿ ನಡೆಸಿದ್ದಾರೆ. ದೆಹಲ್ಲಿ 2 ಲಕ್ಷ ಸರ್ಕಾರಿ ಹಾಗೂ 10 ಲಕ್ಷ ಖಾಸಗಿ ಉದ್ಯೋಗ ನೀಡಿದ್ದೇವೆ. ಇದೆ ಕಾರಣಕ್ಕೆ ಸಿಬಿಐ ಮೂಲಕ ನಮ್ಮ ಮೇಲೆ ದಾಳಿ ನಡೆಸಲಾಗುತ್ತಿದೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಹೇಳಿದ್ದಾರೆ.