ಪ್ರಜಾಸ್ತ್ರ ಸುದ್ದಿ
ಮೈಸೂರು: ನಾನು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿಲ್ಲ. ಅದು ಕಾಂಗ್ರೆಸ್ ನವರು ತಿರುಚಿದ ಫೋಟೋ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ಸೇ ಬೇರೆ. ಈಗಿನ ಕಾಂಗ್ರೆಸ್ಸೇ ಬೇರೆ ಎಂದು ತಿರುಗೇಟು ನೀಡಿದರು.
ಆಗಿನ ಕಾಂಗ್ರೆಸ್ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ದಾರೆ. ಈಗಿನವರು ಬೇರೆ ಬೇರೆ ಕಾರಣಕ್ಕೆ ಜೈಲಿಗೆ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನಾಯಕರು ಜೈಲಿಗೆ ಹೋದರೆ ಅಚ್ಚರಿ ಪಡಬೇಕಿಲ್ಲ ಎಂದರು.