ಪಂಚರತ್ನ ಯಾತ್ರೆಗೂ ನನಗೂ ಸಂಬಂಧವಿಲ್ಲ: ಶಾಸಕ ಶ್ರೀನಿವಾಸ್

239

ಪ್ರಜಾಸ್ತ್ರ ಸುದ್ದಿ

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ನಡೆಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್, ಯಾತ್ರೆಗೂ ನನಗೂ ಸಂಬಂಧವಿಲ್ಲ. ನಾನು ರ್ಯಾಲಿಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ನಿಂದ ದೂರ ಆಗಿರುವ ಶಾಸಕರನ್ನು ಪಕ್ಷ ಉಚ್ಛಾಟಿಸಿದೆ. ಕರ್ನಾಟಕದಲ್ಲಿ ಹಾಯ್ದು ಹೋದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಶಾಸಕ ಶ್ರೀನಿವಾಸ್ ಭಾಗವಹಿಸಿದ್ದರು. ಈ ಮೂಲಕ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು. ಆದರೆ, ಟಿಕೆಟ್ ಗಾಗಿ ಅರ್ಜಿ ಹಾಕುವುದಿಲ್ಲವೆಂದಿರುವುದು ಕುತೂಹಲ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!