ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿದ್ದರಿಂದ ಮುನಿಸಿಕೊಂಡಿರುವ ಬಿಜೆಪಿ ಸಂಸದ ಡಿ.ವಿ ಸದಾನಂದಗೌಡ, ತಮ್ಮ ನಿರ್ಧಾರವನ್ನು ಮಂಗಳವಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಬಿಜೆಪಿ ನಾಯಕರು ನಿನ್ನೆ ನಮ್ಮ ಮನೆಗೆ ಬಂದಿದ್ದರು. ಮನವೊಲಿಸುವ ಪ್ರಯತ್ನ ಮಾಡಿದರು. ಕುಟುಂಬದವರೊಂದಿಗೆ ಚರ್ಚಿಸಬೇಕು. ಕಾಂಗ್ರೆಸ್ ನಾಯಕರು ಸಹ ಸಂಪರ್ಕಿಸಿದ್ದಾರೆ ಎನ್ನುವ ಮೂಲಕ ತಮ್ಮ ನಡೆಯ ಕುರಿತು ಕುತೂಹಲ ಮೂಡಿಸಿದ್ದಾರೆ.