ಪ್ರಜಾಸ್ತ್ರ ಸುದ್ದಿ
ವಿಜಯನಗರ: ಹೊಸಪೇಟೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿಯಲ್ಲಿ ಕರ್ನಾಟಕ ಸಂಭ್ರಮ 50 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಸಿಎಂ ಬದಲಾವಣೆ ವಿಚಾರ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 5 ವರ್ಷ ನಮ್ಮದೆ ಸರ್ಕಾರ. ನಾನೇ ಮುಂದುವರೆಯುವೆ ಎಂದಿದ್ದಾರೆ.
ರಮೇಶ ಜಾರಿಕಿಹೊಳಿ ಸರ್ಕಾರ ಬೀಳುತ್ತೆ ಎನ್ನುತ್ತಿದ್ದಾರೆ ಎಂದು ಕೇಳಿದಾಗ, ಸೋತಿದ್ದಾರೆ. ಅವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. 5 ವರ್ಷ ನಮ್ಮದೇ ಸರ್ಕಾರ ಇರುತ್ತೆ. ನಾನೇ ಮುಂದುವರೆಯುತ್ತೇನೆ. ಡಿಸಿಎಂ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದರು.
ಇದಕ್ಕೂ ಮೊದಲು ಕೊಪ್ಪಳದಲ್ಲಿ ಮಾತನಾಡಿದಾಗಲೂ ಇದೆ ಮಾತನ್ನು ಹೇಳಿದ್ದರು. ಇಲ್ಲಿಯೂ ತಾವೇ ಐದು ವರ್ಷ ಮುಖ್ಯಮಂತ್ರಿ ಎಂದಿದ್ದಾರೆ. ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಎರಡೂವರೆ ವರ್ಷ ಸಿದ್ದರಾಮಯ್ಯ ಸಿಎಂ, ನಂತರದ ಎರಡೂವರೆ ವರ್ಷ ಡಿ.ಕೆ ಶಿವಕುಮಾರ್ ಎನ್ನಲಾಗುತ್ತಿತ್ತು. ಹಲವು ಕೈ ನಾಯಕರು ಇದನ್ನೇ ಪರೋಕ್ಷವಾಗಿ ಹೇಳುತ್ತಿದ್ದರು. ಈಗ ನೋಡಿದರೆ 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದು ಮುಂದೆ ಯಾವ ಸ್ವರೂಪ ಪಡೆಯುತ್ತೆ ಕಾದು ನೋಡಬೇಕು.