ಪ್ರಜಾಸ್ತ್ರ ಸುದ್ದಿ
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲವೆಂದು ವಿಪಕ್ಷ ನಾಯಕ, ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಇಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದಿದ್ದಾರೆ.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಇಲವಾಲ, ಚಾಮುಂಡೇಶ್ವರಿ ಬ್ಲಾಕ್ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ. ಕೊಪ್ಪಳ, ಕೋಲಾರ, ಹುಣಸೂರು, ವರುಣಾದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ. ಧರ್ಮಾಧರಿತ ಸರ್ಕಾರ ಕಿತ್ತೊಗೆಯಬೇಕು ಅನ್ನೋ ಕಾರಣಕ್ಕೆ ಈ ಬಾರಿ ಸ್ಪರ್ಧಿಸುತ್ತೇನೆ. 2028ರ ನಂತರ ಯಾವುದೇ ಹುದ್ದೆ ನೀಡಿದರೂ ಪಡೆಯುವುದಿಲ್ಲವೆಂದರು.