ಪ್ರಜಾಸ್ತ್ರ ಸುದ್ದಿ
ನವದೆಹಲಿ: ನಾನು ರಾಷ್ಟ್ರಪತಿ ಅವರನ್ನು ಅವಮಾನಿಸುವ ಕುರಿತು ಯೋಚನೆ ಸಹ ಮಾಡಿಲ್ಲ. ಬಾಯಿ ತಪ್ಪಿನಿಂದ ರಾಷ್ಟ್ರಪತ್ನಿ ಎಂದಿದ್ದೇನೆ. ಹೀಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯಾಗಿ ಕ್ಷಮೆ ಕೇಳುತ್ತೇನೆ ಎಂದು ಕಾಂಗ್ರೆಸ್ ಸಂಸದ ಅಧೀರ್ ಚೌಧರಿ ಹೇಳಿದ್ದಾರೆ.
ಬಿಜೆಪಿಯವರು ಇದನ್ನು ಸುಮ್ಮನೆ ದೊಡ್ಡದು ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಸೋನಿಯಾ ಗಾಂಧಿಯವರನ್ನು ಎಳೆದು ತರುವುದು ಯಾಕೆ? ನಾನು ಶಿಕ್ಷೆ ಅನುಭವಿಸಲು ಸಿದ್ಧ. ಇದನ್ನು ಬಿಟ್ಟು ಬಿಜೆಪಿ ಸೋನಿಯಾ ಗಾಂಧಿ ಹೆಸರನ್ನು ತರುವುದು ಸರಿಯಲ್ಲ ಎಂದಿದ್ದಾರೆ. ಬಿಜೆಪಿ ಪ್ರತಿಭಟನೆಯಿಂದ ಕಲಾಪ ಸಂಜೆ 4ಗಂಟೆಗೆ ಮುಂದೂಡಲಾಗಿದೆ.