ಐಪಿಎಸ್, ಐಎಎಸ್ ಅಧಿಕಾರಿಗಳ ಬಂಧನ

240

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜೆ.ಮಂಜುನಾಥ್, ಪಿಎಸ್ಐ ನೇಮಕಾತಿಯ ಅಕ್ರಮ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಬಂಧನವಾಗಿದೆ. ಹೀಗೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಿರಿಯ ಅಧಿಕಾರಿಗಳ ಬಂಧನವಾಗಿದೆ.

ಬೆಂಗಳೂರು ನಗರ ಡಿಸಿ ಕಚೇರಿಯಲ್ಲಿಯೇ ಲಂಚ ಪಡೆಯುತ್ತಿದ್ದಾಗ ಮ್ಯಾನೇಜರ್ ಎಸಿಬಿ ಬಲೆಗೆ ಬಿದ್ದಿದ್ದ. ಈ ಪ್ರಕರಣದ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಐಸಿಪಿಎಸ್ ಸಮಗ್ರ ಮಕ್ಕಳ ರಕ್ಷಣಾ ಆಯೋಗದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಎಸಿಬಿ ಅಧಿಕಾರಿಗಳು ಜೆ.ಮಂಜುನಾಥ್ ಅವರನ್ನು ಬಂಧಿಸಿದ್ದಾರೆ.

ಅಮೃತ್ ಪೌಲ್

ಇನ್ನು ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರ ಬಂಧನವಾಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಪೌಲ್ ಅವರನ್ನು ಬೆಂಗಳೂರಿನ ಆಂತರಿಕ ವಿಭಾಗಕ್ಕೆ ಎತ್ತಂಗಡಿ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಬಾರಿಗೆ ಸಿಐಡಿ ಕಚೇರಿಗೆ ವಿಚಾರಣೆಗೆ ಬಂದಿದ್ದ ಪೌಲ್ ಬಂಧನವಾಗಿದೆ. 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!