ಇಂಡಿಯಾ-ಇಂಗ್ಲೆಂಡ್ ಕದನ: ಟೀಂ ಇಂಡಿಯಾ ಸೇರಿದ ಧೋನಿ

214

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಭಾನುವಾರದಿಂದ ಟಿ-20 ವರ್ಲ್ಡ್ ಕಪ್ ಕದನ ಶುರುವಾಗಿದೆ. ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ ತಂಡಕ್ಕೆ 4 ಬಾರಿ ಕಪ್ ತರುವಲ್ಲಿ ಯಶಸ್ವಿ ನಾಯಕನಾಗಿರುವ ಎಂ.ಸಿ ಧೋನಿ ಟೀಂ ಇಂಡಿಯಾ ಸೇರಿದ್ದಾರೆ. ಅರೇ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಅದ್ಹೇಗೆ ಟೀಂ ಇಂಡಿಯಾಗೆ ಸೇರಿದರು ಅಂತೀರಾ.

ಇಂದು ಸಂಜೆ 7.30ಕ್ಕೆ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವೆ ಪಂದ್ಯ ನಡೆಯಲಿದೆ. ಆದರೆ, ಧೋನಿ ಸೇರಿಕೊಂಡಿರುವುದು ಮೆಂಟರ್ ಆಗಿ. ಐಸಿಸಿ ಟಿ-20 ವರ್ಲ್ಡ್ ಕಪ್ ಟೂರ್ನಿಗಾಗಿ ಧೋನಿಯನ್ನು ಮಾರ್ಗದರ್ಶಕರನ್ನಾಗಿ ಬಿಸಿಸಿಐ ನೇಮಕ ಮಾಡಿದೆ. ಈ ಮೂಲಕ ಏಕದಿನ ವಿಶ್ವಕಪ್, ಟಿ-20 ವಿಶ್ವಕಪ್, ಏಷಿಯನ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಗೆಲ್ಲಿಸಿದ ಧೋನಿ, ಕೊಹ್ಲಿ ಪಡೆಗೆ ಮಾರ್ಗದರ್ಶನ ನೀಡಲಿದ್ದಾರೆ.

ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ತನ್ನ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಲ್ಲಿ ಸಾಕಷ್ಟು ಖುಷಿ ತಂದಿದೆ. ಮುಖ್ಯ ಕೋಚ್ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋಡ್ ಹಾಗೂ ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಅವರೊಂದಿಗೆ ಚರ್ಚೆ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿದೆ.




Leave a Reply

Your email address will not be published. Required fields are marked *

error: Content is protected !!