‘ಯತ್ನಾಳಗೆ ಬಿಜೆಪಿ ನೋಟಿಸ್ ನೀಡಿದರೆ ಅವರ ಪರ ನಿಲ್ಲುತ್ತೇವೆ’

136

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ನೋಟಿಸ್ ನೀಡಿದರೆ ನಾವೆಲ್ಲ ಅವರ ಪರ ನಿಲ್ಲುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಇಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಯತ್ನಾಳಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದರು.

ಒಂದು ವೇಳೆ ನೋಟಿಸ್ ನೀಡಿದರೆ ಅವರ ಪರ ನಿಲ್ಲುತ್ತೇವೆ. ನೋಟಿಸ್ ನೀಡಿದರೆ ಉಳಿದವರು ಭಯ ಪಡುತ್ತಾರೆ ಎಂದುಕೊಂಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ 2 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಇವತ್ತು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದರು.




Leave a Reply

Your email address will not be published. Required fields are marked *

error: Content is protected !!