ಪ್ರಜಾಸ್ತ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ನಡೆಯುತ್ತಿದೆ ಅನ್ನೋ ಚರ್ಚೆ ಕೆಲ ದಿನಗಳಿಂದ ಭರ್ಜರಿಯಾಗಿ ನಡೆಯುತ್ತಿದೆ. ಇದಕ್ಕೆ ಸಚಿವರು ಪುಷ್ಠಿ ನೀಡುವಂತೆ ಮಾತನಾಡಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬಂದ್ರೆ ಸ್ವಾಗತ ಎಂದಿದ್ದಾರೆ. ಈ ಮೂಲಕ ಬಹಿರಂಗ ಆಹ್ವಾನ ನೀಡಿದ್ದಾರೆ.
ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ನಾವು ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದೆ. ಇದುವರೆಗೂ ಬಿಜೆಪಿಗೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಆಗಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ ಎಂದರು.
ಇಂದಿನಿಂದ ಮೂರು ದಿನಗಳ ಸಿಎಂ ಮೈಸೂರು ಪ್ರವಾಸ ಮಾಡಲಿದ್ದಾರೆ. ನಾಳೆ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ, ನಾಡಿದ್ದು ಜಿಲ್ಲೆಯ ವಿವಿಧ ಕಡೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.