ಪ್ರಜಾಸ್ತ್ರ ಸುದ್ದಿ
ಸುಳ್ಯ: ವಿವಾಹಿತೆ ಮಹಿಳೆಯ ಜೊತೆಗೆ ಕಾರಿನಲ್ಲಿ ಬಿಜೆಪಿ ಮುಖಂಡನೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಮಹಿಳೆಯನ್ನು ಕಾರಿನಲ್ಲಿ ಬಿಟ್ಟು ಹರಿಪ್ರಸಾದ್ ಯಾದವ್ ಎಂಬಾತ ಪರಾರಿಯಾಗಿದ್ದಾನೆ.
ಬಂಟ್ವಾಳ ತಾಲೂಕು ಕೇಪು ಗ್ರಾಮ ಮುಳಿಯಾಲ ಮುಗೇರು ನಿವಾಸಿ, ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರೆನ್ನಲಾಗುತ್ತಿದೆ. ಮಹಿಳೆಯ ಪತಿ ಪುತ್ತೂರು ಸಹಾಯಕ ಪೊಲೀಸ್ ಅಧೀಕ್ಷರಿಗೆ ದೂರು ನೀಡಿದ್ದಾರೆ.
ಅನೈತಿಕ ಸಂಬಂಧ ನಡೆಸುವ ಹಿನ್ನೆಲೆಯಲ್ಲಿಯೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದು, ಇದನ್ನು ತಿಳಿದು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗಿ ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ಬೈಕ್ ಅಡ್ಡ ಹಾಕಿ ಕಾರು ತಡೆಯಲಾಗಿದೆ. ಆಗ ಆತ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.