ಪ್ರಜಾಸ್ತ್ರ ಸುದ್ದಿ
ವಿಜಯಪುರ: ಲಕ್ಷಾಂತರ ಮೌಲ್ಯದ ಅಕ್ಕಿಯನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು, ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ಕಿ ಸಮೇತ ಆರೋಪಿಯನ್ನ ಬಂಧಿಸಿದ್ದಾರೆ.
ಬಾಗಲಕೋಟ ಜಿಲ್ಲೆಯ ಗದ್ದನಕೇರಿ ನಿವಾಸಿ ಸದ್ದಾಂ ಅಮೀನಸಾಬ್ ಜಂಗಿ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿ ಸದ್ದಾಂ ಅಕ್ರಮವಾಗಿ ಸುಮಾರು 8 ಲಕ್ಷ ಮೌಲ್ಯದ 296 ಕ್ವಿಂಟಲ್ ಅಕ್ಕಿಯನ್ನ ವಿಜಯಪುರದಿಂದ ನಿಡಗುಂದಿ ಮಾರ್ಗವಾಗಿ KA-29 B-8299 ನಂಬರಿನ ಲಾರಿಯಲ್ಲಿ ಸಾಗಿಸ್ತಿದ್ದ.
ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಮನಗೂಳಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಅಕ್ಕಿಯ ತನಿಖೆ ನಡೆಯುತ್ತಿದೆ.