ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಅಕ್ರಮ ಮರುಳು ಸಾಗಾಟದ ಟ್ರ್ಯಾಕ್ಟರ್ ಹರಿದು ಪೊಲೀಸ್ ಕಾನ್ಸ್ ಟೇಬಲ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲ್ಲೂರು ಹತ್ತಿರ ನಡೆದಿದೆ. ನೆಲೋಗಿ ಠಾಣೆಯ ಮುಖ್ಯ ಪೇದೆ ಮಯೂರ ಭೀಮು ಚವ್ಹಾಣ ಮೃತಪಟ್ಟಿದ್ದಾರೆ.
ಈ ಘಟನೆ ಸಂಬಂಧ ತನಿಖೆಗೆ ಜಿಲ್ಲಾಧಿಕಾರಿ, ಎಸ್ಪಿ ಅವರಿಗೆ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಅಕ್ರಮ ಮರುಳು ಸಾಗಾಟ ಸಂಬಂಧ ಕಟ್ಟುನಿಟ್ಟಿನ ಕ್ರಮದ ಬಗ್ಗೆ ಈಗಾಗ್ಲೇ ಅಧಿಕಾರಿಗಳಿಗೆ ಹೇಳಿದ್ದೇನೆ. ಮತ್ತೊಮ್ಮೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಆದೇಶಿಸುತ್ತೇನೆ. ಜೊತೆಗೆ ಮೃತ ಪೇದೆ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಶೀಘ್ರದಲ್ಲಿ ಒದಗಿಸುವ ಕೆಲಸ ಮಾಡಲಾಗುವುದು ಅಂತಾ ಹೇಳಿದ್ದಾರೆ.