ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ ಖಾನಗೆ ಹೈಕೋರ್ಟ್ ಶಾಕ್ ನೀಡಿದೆ. ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಂಗೆ ಸೇರಿದ ಆಸ್ತಿ ಮುಟ್ಟುಗೋಲು ತಡೆಗೆ ಹೈಕೋರ್ಟ್ ನಿರಾಕರಿಸಿದೆ.
ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣಾ ಕಾಯ್ದೆ 2004ರ ಅನುಸಾರ, ರಾಜ್ಯ ಸರ್ಕಾರ ಸಕ್ಷಮ ಪ್ರಾಧಿಕಾರ ನೇಮಿಸಿದೆ. ಈ ಆದೇಶ ರದ್ದು ಮಾಡುವಂತೆ ಕೋರಿ ಐಎಂಎ ಮುಖ್ಯಸ್ಥ ಮನ್ಸೂರ ಖಾನ ಹೈಕೋರ್ಟ್ ಮೆಟ್ಟಿಲು ಏರಿದ್ದ. ಇದನ್ನ ಹೈಕೋರ್ಟ್ ನಿರಾಕರಣೆ ಮಾಡಿದೆ. ಈ ಮೂಲಕ ಐಎಂಎ ಸಂಸ್ಥೆಗೆ ಸೇರಿದ ಆಸ್ತಿ ಮುಟ್ಟುಗೋಲಿಗೆ ಶಕ್ತಿ ಬಂದಿದೆ.