ಬಿಜೆಪಿಯಲ್ಲಿ ಮಹಿಳೆಯರಿಗೂ ಹೆಚ್ಚಿನ ಪ್ರಾಶಸ್ತ್ಯ: ಭೂಸನೂರ

532

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದಲ್ಲಿ ಇಂದು ಬಿಜೆಪಿ ಸಿಂದಗಿ ಮಂಡಲ ಮಹಿಳಾ ಕಾರ್ಯಾಕರಣಿ ಸಭೆ ನಡೆಯಿತು. ಈ ವೇಳೆ ಮಾತ್ನಾಡಿದ ಮಾಜಿ ಶಾಸಕ ರಮೇಶ ಭೂಸನೂರ, ಬಿಜೆಪಿಯಲ್ಲಿ ಮಹಿಳೆಯರಿಗೂ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ ಎಂದರು. ಇನ್ನು ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಲು ಮಹಿಳಾ ಕಾರ್ಯಕರ್ತರಿಗೆ ಕರೆ ನೀಡಿದರು.

ಈ ವೇಳೆ ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಂದಾ ಯಂಪೂರೆ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶಿಲ್ಪಾ ಕುದರಗೊಂಡ ಮಾತ್ನಾಡಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ಮಲ್ಲಮ್ಮ ಪಾಟೀಲ, ಭಾರತಿ ಭೂಯಾರ, ಗಾಯತ್ರಿ ದೇವೂರ, ಅನಸುಯಾ ಪಾರಗೊಂಡ, ಶಾರದಾ ಮಂಗಳೂರು, ಸಂಗೀತಾ ತೀಕೋಟಿ, ಮಂಗಲಾ ಗುಡಿಮಠ, ಗಂಗುಬಾಯಿ ಅಮ್ಮಲಜರಿ, ಸುನಂದಾ ಭಜಂತ್ರಿ ಹಾಗೂ ತಾಲೂಕು, ಜಿಲ್ಲಾ ಮಹಿಳಾ ಪದಾಧಿಕಾರಿಗಳು ಕೆಡಿಪಿ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!