ರಾಮ ಮಂದಿರ ಉದ್ಘಾಟನೆ: ನಟ ಕಿಶೋರ್ ಪೋಸ್ಟ್ ವೈರಲ್

177

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿಯೂ ಸಾಕಷ್ಟು ಅಸಮಾಧಾನಗಳು ವ್ಯಕ್ತವಾದವು. ಅದೆಲ್ಲದರ ನಡುವೆ ಇಂದು ಪ್ರಧಾನಿ ಮೋದಿ, ಮಂದಿರ ಉದ್ಘಾಟನೆ ಮಾಡಿದ್ದಾರೆ. ಶಂಕರಾಚಾರ್ಯ ಪೀಠದ ಸ್ವಾಮೀಜಿಗಳು ಸಹ ಈ ಸಮಾರಂಭದಿಂದ ದೂರ ಉಳಿದರು. ರಾಜಕೀಯವಾಗಿ ಕಾಂಗ್ರೆಸ್ ಸೇರಿ ಅನೇಕ ಪಕ್ಷಗಳು ಅಂತರ ಕಾಯ್ದುಕೊಂಡವು. ಇನ್ನು ಸಿನಿಮಾ, ಕ್ರೀಡೆ, ಉದ್ಯಮ ಕ್ಷೇತ್ರದ ಅನೇಕರು ಭಾಗಿಯಾಗಿದ್ದರು.

ಮೋದಿ ಆಡಳಿತ ವೈಖರಿಯ ಬಗ್ಗೆ ತಮ್ಮ ಟೀಕಾಸ್ತ್ರಗಳನ್ನು ಪ್ರಯೋಗ ಮಾಡುತ್ತಿರುವ ನಟ ಕಿಶೋರ್ ಕುಮಾರ್ ಮಾಡಿರುವ ಪೋಸ್ಟ್ ವೈರಲ್ ಆಗಿದೆ. ಈ ಬಗ್ಗೆ ಪರ, ವಿರೋಧದ ಮಾತುಗಳು ಕೇಳಿ ಬರುತ್ತಿವೆ.

ಮಂದಿರ, ರಾಜರು ಮತ್ತು ರಾಜಕೀಯ ನಿಯಂತ್ರಣ… ನಾವು ನೋಡದ್ದೇನಲ್ಲ.. ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ.. ದೇವರ ಹೆಸರಲ್ಲಿ ಪೂಜಾರಿಯೊಂದಿಗೆ ಸೇರಿ ಜನರನ್ನು ನಿಯಂತ್ರಿಸಿ, ದೇಗುಲ ಕಟ್ಟಿಸಿ, ತಮ್ಮ ಹೆಸರು ಕೆತ್ತಿಸಿ, ದೇಗುಲದ ಶಿಲ್ಪಿಯ ಕೈ ಕತ್ತರಿಸಿ, ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿ, ಅಜರಾಮರರಾದ ದೊರೆಗಳು … ಉಧೋ ಉಧೋ ಎಂದ ಪ್ರಜೆಗಳು, ಭಟ್ಟಂಗಿಗಳು … ಧರ್ಮ ಮತ್ತು ದೇವರು ರಾಜಕಾರಿಣಿಗಳ ಕೈಗೆ ಹೋಗಿ ತಾವೂ ಪ್ರಶ್ನಾತೀತವಾಗಿ ಅವರನ್ನೂ ಶ್ನಾತೀತರನ್ನಾಗಿಸಿಬಿಡುವುದು ಸಂಸ್ಕೃತಿಯ ಚಲನಶೀಲತೆಗೆ, ನಾಡಿನ ಭವಿಷ್ಯಕ್ಕೆ ಅತೀ ಅಪಾಯಕಾರಿ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!