ಪ್ರಜಾಸ್ತ್ರ ಸುದ್ದಿ
ಅಥಣಿ: ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ಅಥಣಿ ತಾಲೂಕಿನ ಕರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂಪಾಯಿಗಳ ಪ್ರೋತ್ಸಾಹಧನ ವಿತರಣೆ ಮಾಡಿದ್ರು.
ಅಥಣಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ 200 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನವನ್ನ ವಿತರಣೆ ಮಾಡಿದರು. ಈ ವೇಳೆ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಜಿ ಎಂ ಪಾಟೀಲ, ಸೈಬಣ್ಣಾ ಕಮತಗಿ, ವಿನಾಯಕ, ಶಂಕರ ನಂದೇಶ್ವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.