ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಂಗಳೂರಿನಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಹಾಗೂ ಫಾಜಿಲ್ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಋಷಿಕುಮಾರಸ್ವಾಮಿ ಹತ್ಯೆಗೆ ಪ್ರಚೋದನೆ ನೀಡುತ್ತಿರುವ ವಿಚಾರ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ತುಮಕೂರು ಎಸ್ಪಿಗೆ ಅವರಿಗೆ ಟ್ವೀಟರ್ ನಲ್ಲಿ ಟ್ಯಾಗ್ ಮಾಡಿ ಜನರ ನೆಮ್ಮದಿ ಕೆಡಸುತ್ತಿರುವ ಇಂತವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎನ್ನುತ್ತಿದ್ದಾರೆ. ತುಮಕೂರನ್ನು ಕರಾವಳಿ ಮಾಡುವ ಕೃತ್ಯಕ್ಕೆ ನಿಮ್ಮ ಬೆಂಬಲವಿದೆಯೇ ಎಂದು ಪ್ರಶ್ನಿಸಿದ್ದಾರೆ.