ಪ್ರಜಾಸ್ತ್ರ ಸುದ್ದಿ
ಮೈಸೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜಾತಿಯ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಜೇನುಗೂಡಿಗೆ ಕಲ್ಲು ಹೊಡೆಯುವ ಕೆಲಸವನ್ನು ಸರ್ಕಾರ ಮಾಡಿದೆ ಎಂದಿದ್ದಾರೆ.
ಎರಡು ವರ್ಷಗಳ ಹಿಂದೆಯೇ ನಾಗಮೋಹನ್ ದಾಸ್ ವರದಿ ನೀಡಿದೆ. ಅದನ್ನು ಈಗ ಅನುಷ್ಠಾನ ಮಾಡುತ್ತಿರುವ ಹಿಂದಿನ ಅರ್ತ ಏನು ಎಂದು ಎಲ್ಲರಿಗೂ ಗೊತ್ತಿದೆ. ಇದರಿಂದ ನಿಮಗೆ ವೋಟ್ ಸಿಗುವುದಿಲ್ಲ. ತಮ್ಮ ಬೇಳೆ ಬೇಯಿಸಿಕೊಳ್ಳುವುದಕ್ಕಾಗಿ ಮೀಸಲಾತಿ ಹೋರಾಟ ಹುಟ್ಟು ಹಾಕಿದ್ದು, ಮುಂದೆ ಒಂದು ಅದೆ ಅವರಿಗೆ ತಿರುಗು ಬಾಣ ಆಗುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.