ಭಾರತ ಇಂಗ್ಲೆಂಡ್ ಸರಣಿ ರದ್ದಾಗದಿದ್ದರೆ ಆತ್ಮಹತ್ಯೆ!

397

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ-20 ಸರಣಿಯನ್ನ ರದ್ದು ಮಾಡಬೇಕು. ಒಂದು ವೇಳೆ ರದ್ದು ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ಗಾಂಧಿನಗರದ ಪಂಕಜ ಪಟೇಲ್ ಎಂಬಾತ ಈ ರೀತಿ ಬೆದರಿಕೆಯೊಡಿದ್ದು, ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕೋವಿಡ್ 19 ಸೋಂಕು ಹೆಚ್ಚಾಗುತ್ತಿದೆ. ಕ್ರಿಕೆಟ್ ಮೈದಾನದಲ್ಲಿ 75 ಸಾವಿರಕ್ಕೂ ಹೆಚ್ಚು ಜನ ಕುಳಿತು ನೋಡುವುದ್ರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸರಣಿ ರದ್ದುಗೊಳಿಸಬೇಕು ಎಂದು, ಪಂದ್ಯಗಳ ಭದ್ರತೆಗೆ ಒದಗಿಸಲಾಗಿರುವ ಹಿರಿಯ ಪೊಲೀಸ್ ಅಧಿಕಾರಿಗೆ ಫೋನ್ ಮಾಡಿ ಆತ್ಮಹತ್ಯೆಯ ಬೆದರಿಕೆ ಹಾಕಿದ್ದಾನೆ.

5 ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತ-ಇಂಗ್ಲೆಂಡ್ 1-1ರಲ್ಲಿ ಸಮಬಲ ಸಾಧಿಸಿವೆ. ಮಂಗಳವಾರ ಸಂಜೆ 7 ಗಂಟೆಗೆ 3ನೇ ಪಂದ್ಯ ನಡೆಯುತ್ತಿದೆ.


TAG


Leave a Reply

Your email address will not be published. Required fields are marked *

error: Content is protected !!