ಪ್ರಜಾಸ್ತ್ರ ಕ್ರೀಡಾ ಸುದ್ದಿ
ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ 3 ಪಂದ್ಯಗಳ ಸರಣಿಯನ್ನು 2-0ದೊಂದಿಗೆ ಮುನ್ನಡೆ ಸಾಧಿಸುವುದರ ಜೊತೆಗೆ ಸರಣಿ ವಶಪಡಿಸಿಕೊಂಡಿದೆ. ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಕುಲದೀಪ್ ಯಾದವ್ ಹಾಗೂ ಸಿರಾಜ್ ಬೌಲಿಂಗ್ ಎದುರು ಮಂಕಾಯಿತು.
ಫರ್ನಾಂಡೋ 50, ಮೆಂಡಿಸ್ 34 ರನ್ ಹೊರತುಪಡಿಸಿ ಉಳಿದ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ಹೀಗಾಗಿ 39.4 ಓವರ್ ಗಳಲ್ಲಿ 215 ರನ್ ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಉರ್ಮನ್ ಮಲಿಕ್ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.
ನಂತರ ಬ್ಯಾಟ್ ಮಾಡಿದ ಭಾರತ ಕೆ.ಎಲ್ ರಾಹುಲ್ ಅಜೇಯ 64, ಪಾಂಡ್ಯ 36, ಶ್ರೇಯಸ್ ಅಯ್ಯರ್ 28, ಅಕ್ಷರ್ ಪಟೇಲ್ 21 ರನ್ ಗಳಿಂದ 43.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಕುಲದೀಪ್ ಯಾದವ್ ಪ್ಲೇಯರ್ ಆಫ್ ದಿ ಮ್ಯಾಚ್ ಆದರು.