ಪ್ರಜಾಸ್ತ್ರ ಸುದ್ದಿ
ಸಿಂದಗಿ: ರಾಷ್ಟ್ರೀಯ ಬಸವ ದಳದ ವತಿಯಿಂದ ಪಟ್ಟಣದ ಅಂಬಿಗೇರ ಚೌಡಯ್ಯ ಸರ್ಕಲ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಬಸವ ದಳದ ಅಧ್ಯಕ್ಷ ಶಿವಾನಂದ ಕಲಬುರ್ಗಿ ಧ್ವಜಾರೋಹಣ ನೆರವೇರಿಸಿದರು.
ಬಸವ ಮಂಟಪದ ಪ್ರಭುಲಿಂಗ ಮಹಾಸ್ವಾಮಿಗಳು, ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ, ದೇಶಕ್ಕಾಗಿ ತಮ್ಮ ಇಡೀ ಬದುಕನ್ನು ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸಿದರು. ಈ ವೇಳೆ ಬಸವ ದಳದ ಸದಸ್ಯರು ಸೇರಿದಂತೆ ಹಲವರು ಭಾಗವಹಿಸಿದ್ದರು.