ಧ್ವಜಸ್ತಂಭ ನಿಲ್ಲಿಸುವ ವೇಳೆ ಅನಾಹುತ: ಬಾಲಕ ಸಾವು

250

ಪ್ರಜಾಸ್ತ್ರ ಸುದ್ದಿ

ತುಮಕೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅನಾಹುತವೊಂದು ನಡೆದಿದ್ದು, ಬಾಲಕನೊಬ್ಬ ಮೃತಪಟ್ಟಿದ್ದಾನೆ. ಧ್ವಜಸ್ತಂಭ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ಕರೀಕೆರೆಯಲ್ಲಿ ನಡೆದಿದೆ.

ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಧ್ವಜಸ್ತಂಭ ನಿಲ್ಲಿಸುವಾಗ ಕಂಬ ವಿದ್ಯುತ್ ತಂತಿಗೆ ತಗುಲಿದೆ. ಇದ್ರಿಂದಾಗಿ ಚಂದನ್ ಅನ್ನೋ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಶಶಾಂಕ್ ಹಾಗೂ ಪವನ್ ಅನ್ನೋ ಬಾಲಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!