ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತುಮಕೂರಿನ ಕರಿಕೆರೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವನ್ನಪ್ಪಿದ್ದ ಘಟನೆ ಸಂಬಂಧ, ಆತನ ಪೋಷಕರಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
15 ವರ್ಷದ ಚಂದನ್ ಧ್ವಜದ ಕಂಬ ನೆಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ಅಭಯ್ ಓಕಾ, ಎನ್.ಎಸ್ ಸಂಜಯಗೌಡ ಅವರನ್ನೊಳಗೊಂಡ ಪೀಠ, ತುಮಕೂರು ಉಪ ಆಯುಕ್ತರು ಪರಿಶೀಲನೆ ನಡೆಸುವಂತೆ ಸೂಚಿಸಿದೆ.
ಇನ್ನು ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಇನ್ನು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ವಿದ್ಯಾರ್ಥಿಗಳ ಆರೋಗ್ಯದ ಕುರಿತು ವಿಚಾರಿಸಬೇಕು. ಅವರ ವೈದ್ಯಕೀಯ ವೆಚ್ಚವನ್ನ ಸರ್ಕಾರ ಭರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.