ಪ್ರಜಾಸ್ತ್ರ ಸುದ್ದಿ
ನವದೆಹಲಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ವಾಯು ಸೇನಾ ಚಟುವಟಿಕೆಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯು ಸೇನೆಯಿಂದ ಗಸ್ತು ಪ್ರಾರಂಭಿಸಲಾಗಿದೆ. ವಾಸ್ತವ ನಿಯಂತ್ರಣ ರೇಖೆ ಹತ್ತಿರ ಚೀನಾ ಜೆಟ್ ಗಳ ಹಾರಾಟ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ.
ಇದೆ ವಿಚಾರವಾಗಿ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಗಳವಾರ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಭಾರತದ ಭೂಮಿಯನ್ನು ಚೀನಾ ಆಕ್ರಮಿಸಿಕೊಳ್ಳುತ್ತಿದೆ. ತವಾಂಗ್ ವಲಯದಲ್ಲಿ ಪ್ರಚೋದನೆ ನೀಡುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಬೇಕು ಎಂದಿದೆ.
ತವಾಂಗ್ ವಲಯದಲ್ಲಿ ಚೀನಾ ಯೋಧರು ಗಡಿ ಉಲ್ಲಂಘಿಸಿ ಬಂದಿದ್ದರು. ಅಲ್ಲಿಯೇ ಇದ್ದ ನಮ್ಮ ಯೋಧರು ಅದನ್ನು ಅಲ್ಲಿಯೇ ವಿಫಲಗೊಳಿಸಿದ್ದಾರೆ. ಈ ವೇಳೆ ಎರಡು ಕಡೆ ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಣಹಾನಿ ಸಂಭವಿಸಿಲ್ಲ ಎಂದು ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ತಿಳಿಸಿದರು.