ಪ್ರಜಾಸ್ತ್ರ ಕ್ರೀಡಾ ಸುದ್ದಿ
ಹರಾರೆಯಲ್ಲಿ ಗುರುವಾರದಿಂದ ನಡೆಯಲಿರುವ ಜಿಂಬಾಬ್ವೆ ವಿರುದ್ಧದ ಸರಣಿಗೆ ಭಾರತೀಯ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಅದೇನು ಅಂದರೆ, ವಾಷಿಂಗ್ಟನ್ ಸುಂದರ್ ಬದಲು ಶಹಬಾಜ್ ಅಹ್ಮದ್ ರನ್ನು ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಬಿಸಿಸಿಐ ಟ್ವೀಟ್ ಮೂಲಕ ಮಂಗಳವಾರ ತಿಳಿಸಿದೆ. ಇಂಗ್ಲೆಂಡ್ ನಲ್ಲಿ ಕೌಂಟಿ ಪಂದ್ಯ ಆಡುವಾಗ ಸುಂದರ್ ಭುಜಕ್ಕೆ ಗಾಯ ಮಾಡಿಕೊಂಡಿದ್ದು, ಜಿಂಬಾಬ್ವೆ ವಿರುದ್ಧದ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿಸಲಾಗಿದೆ. 3 ಏಕದಿನ ಪಂದ್ಯಗಳನ್ನು ಆಡಲಿರುವ ಭಾರತದ ಸಾರಥ್ಯವನ್ನು ಕೆ.ಎಲ್ ರಾಹುಲ್ ವಹಿಸಿಕೊಳ್ಳಲಿದ್ದಾರೆ. ಟೀಂ ಈ ರೀತಿಯಾಗಿದೆ.
ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಹರ್, ಶಹಬಾಜ್ ಅಹ್ಮದ್.