ಪ್ರಜಾಸ್ತ್ರ ಸುದ್ದಿ
ನಾಗಾಲ್ಯಾಂಡ್: ಬುಡಕಟ್ಟ ಜನಾಂಗದ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಲಾಗಿದೆ. ಭಯೋತ್ಪಾದಕರೆಂದು ಶಂಕಿಸಿ ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಕನಿಷ್ಠ 13 ಜನರ ಸಾವು ಆಗಿದೆ ಎಂದು ತಿಳಿದು ಬಂದಿದೆ.
ಕಲ್ಲು ಗಣಿಗಾರಿಕೆ ಕೆಲಸ ಮಾಡುತ್ತಿದ್ದ ಯುವಕರನ್ನು ಮಾನ್ ಜಿಲ್ಲೆಯಲ್ಲಿ ಭಯೋತ್ಪಾದಕರೆಂದು ಶಂಕಿಸಿ ಗುಂಡಿನದಾಳಿ ನಡೆಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಡಿಸಿ ತನಿಖೆಗೆ ಆದೇಶಿಸಿದ್ದಾರೆ. ಇನ್ನು ನಾಗಾಲ್ಯಾಂಡ್ ಮುಖ್ಯಮಂತ್ರಿ ಶಾಂತಿ ಕಾಪಾಡಲು ಮನವಿ ಮಾಡಿಕೊಂಡಿದ್ದಾರೆ.