ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಹೆಸರಿಟ್ಟರೆ ತಪ್ಪೇನು: ಸಚಿವ ಸುಧಾಕರ

240

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಾಯಿಸಿ ಮೇಜರ್ ಧ್ಯಾನ್ ಚಂದ್ ಎಂದು ಇಡಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕರ್ನಾಟಕದ ಇಂದಿರಾ ಕ್ಯಾಂಟೀನ್ ಹೆಸರನ್ನ ಅನ್ನಪೂರ್ಣೇಶ್ವರಿ ಎಂದು ಬದಲಾಯಿಸಿ ಎಂದು ಹೇಳಿದ್ದಾರೆ.

ಸಿ.ಟಿ ರವಿ ಹೇಳಿಕೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ ಧ್ವನಿಗೂಡಿಸಿದ್ದಾರೆ. ಇಂದಿರಾ ಕ್ಯಾಂಟೀನ್ ನ್ನ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸುವುದರಲ್ಲಿ ತಪ್ಪೇನು ಎಂದು ಕೇಳಿದ್ದಾರೆ. ಇನ್ನು ಈ ಬಗ್ಗೆ ಸರ್ಕಾರ ಇನ್ನು ನಿರ್ಧಾರ ಮಾಡಿಲ್ಲ. ಅನ್ನಪೂರ್ಣೇಶ್ವರಿ ಎಲ್ಲರಿಗೂ ತಾಯಿ ಇದ್ದಂತೆ ಎನ್ನುವ ಮೂಲಕ ಸಿ.ಟಿ ರವಿ ಪರ ಬ್ಯಾಟ್ ಬೀಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!