ವೃದ್ಧೆ ತಾಯಿಯನ್ನು ನಡುರಾತ್ರಿ ಬಿಟ್ಟು ಹೋದರು..

142

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹೆತ್ತ ತಾಯಿಯನ್ನು ನಡುರಾತ್ರಿ ಕರೆದುಕೊಂಡು ಬಂದು ರಸ್ತೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಆನೇಕಲ್ಲನ ಕಲ್ಲಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಸುಮಾರು 80 ವರ್ಷದ ವೃದ್ಧೆಯನ್ನು ಕಾರಿನಲ್ಲಿ ಕರೆದುಕೊಂಡು ಬಂದು ಬಿಟ್ಟು ಹೋಗಿದ್ದಾರೆ.

ಮಗಳು ಆಶಾರಾಣಿ, ಅಳಿಯ ಮಂಜುನಾಥ್ ಎಂಬುವರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾತ್ರಿ ಇಡೀ ವೃದ್ಧೆ ರಸ್ತೆಯಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ವೃದ್ಧೆಯನ್ನು ಕರೆದುಕೊಂಡು ಹೋಗಿ ಆಶ್ರಮಕ್ಕೆ ಬಿಟ್ಟಿದ್ದಾರೆ. ಈ ಕುರಿತು ತನಿಖೆ ನಡೆಸಿದ್ದಾರೆ. ಎಷ್ಟು ಓದಿ, ಸಂಪಾದನೆ ಮಾಡಿದರೇನು ಬಂತು, ಹೆತ್ತವರನ್ನು ನೋಡಿಕೊಳ್ಳಲು ಆಗದಿದ್ದ ಮೇಲೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!