ರೈತ ನಾಯಕ ಟಿಕಾಯತ್ ಮೇಲೆ ಮಸಿ

213

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಿದ ಘಟನೆ ನಗರದ ಗಾಂಧಿ ಭವನದಲ್ಲಿ ನಡೆದಿದೆ. ‘ರೈತ ಚಳವಳಿ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ’ಯಲ್ಲಿ ಭಾವಗಹಿಸಿದ್ದ ಟಿಕಾಯತ್ ಮೇಲೆ ಯುವಕನೊಬ್ಬ ಮಸಿ ಎರೆಚಿ ಮೋದಿ ಮೋದಿ ಎಂದು ಜೈಕಾರ ಕೂಗಿದ್ದಾನೆ.

ಈ ವೇಲೆ ಹೊಡೆದಾಟ ಬಡೆದಾಟ ಸಹ ನಡೆದಿದೆ. ಕುರ್ಚಿಗಳ್ನು ಮುರಿದು ಹಾಕಲಾಗಿದೆ. ಈ ಬಗ್ಗೆ ಮಾತನಾಡಿದ ಟಿಕಾಯತ್, ಇದನ್ನು ಪೊಲೀಸರ ಮೇಲೆ ಹೊರೆಸಿದ್ದಾರೆ. ಈ ಘಟನೆಗೆ ಕರ್ನಾಟಕ ಸರ್ಕಾರದ ಬೆಂಬಲವಿದೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಯುದುವೀರ್ ಸಿಂಗ್, ತಮಿಳುನಾಡಿನ ನಲ್ಲಗೌಡರ್ ರಾಜ್ಯದ ರೈತ ಮುಖಂಡರಾದ ಸುರೇಶ್ ಬಾಬು ಪಾಟೀಲ್, ಕೆ.ಟಿ.ಗಂಗಾಧರ್, ಅನುಸೂಯಮ್ಮ, ರಾಜೇಗೌಡ, ಚುಕ್ಕಿ ನಂಜುಂಡಸ್ವಾಮಿ, ಚಿಂತಕರಾದ ಪ್ರೊ.ಹಿ.ಶಿ. ರಾಮಚಂದ್ರಗೌಡ, ಪ್ರೊ.ರವಿವರ್ಮ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!