ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ವಿತ್ ಸಚಿವ ಪಿ.ಚಿದಂಬರಂ ಅವರನ್ನ ನವೆಂಬರ್ 13ರವರೆಗೂ ವಿಸ್ತರಣೆ ಮಾಡಲಾಗಿದೆ. ದೆಹಲಿ ಹೈಕೋರ್ಟ್ ಇಂದು ಆದೇಶಿಸಿದೆ.
ಇಡಿ ಅಧಿಕಾರಿಗಳು ಇನ್ನೂ ಹೆಚ್ಚಿನ ತನಿಖೆಗೆ ಒಂದು ದಿನ ಅವಕಾಶ ಕೊಡಿ ಎಂದು ಕೇಳಿದ್ರು. ಅವರ ಮನವಿ ತಿರಸ್ಕರಿಸಿದ ನ್ಯಾಯಾಧೀಶ ಅಜಯಕುಮಾರ ಕುಹರ್, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಜೈಲಿನಲ್ಲಿ ಚಿದಂಬರಂ ಅವರಿಗೆ ವೈದ್ಯಕೀಯ ಸೌಲಭ್ಯ, ವೆಸ್ಟರ್ನ್ ಶೌಚಾಲಯ, ಪ್ರತ್ಯೇಕ ಸೆಲ್ ಹಾಗೂ ಸೂಕ್ತ ಭದ್ರತೆ ನೀಡುವಂತೆ ಸೂಚಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಅವರಿಗೆ ಮನೆಯ ಊಟಕ್ಕೆ ಅನುಮತಿ ನೀಡಲಾಗಿದೆ. ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 21ರಂದು ಸಿಬಿಐ ಬಂಧಿಸಿತ್ತು. ಬಳಿಕ ನ್ಯಾಯಾಂಗ ಬಂಧನ. ತದನಂತರ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ರು.