ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಸಂಚಾರ ವಿಭಾಗದ ಜಂಟಿ ಆಯುಕ್ತ ರವಿಕಾಂತೇಗೌಡ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಈ ಸಂಬಂಧ ಅವರ ಪತ್ನಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಎಸ್ ಅಧಿಕಾರಿಯ ಮನೆಯಲ್ಲಿಯೇ ಕಳ್ಳತನ ನಡೆದಿದ್ದು, ಇನ್ನು ಸಾರ್ವಜನಿಕರ ಪರಿಸ್ಥಿತಿ ಏನು ಅನ್ನೋ ಪ್ರಶ್ನೆ ಮೂಡಿದೆ.
ಡಾ.ಬಿ.ಆರ್ ರವಿಕಾಂತೇಗೌಡ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸದಾಯಕೆ ಚಿನ್ನ ಕಳ್ಳತನ ಮಾಡಿಕೊಂಡು ಹೋಗಿದ್ದಾಳೆ ಎಂದು ದೂರು ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಪರಾರಿಯಾಗಿರುವ ಮನೆ ಕೆಲಸದಾಕೆಯ ಪತ್ತೆ ಕಾರ್ಯ ನಡೆಯುತ್ತಿದೆ.