ಪ್ರಜಾಸ್ತ್ರ ಸುದ್ದಿ
ಮೈಸೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಅಭ್ಯರ್ಥಿಯೊಬ್ಬರ ಸಹೋದರ ಎಂಬುವರ ಮನೆಯ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿನ ಅಲಂಕಾರಿಕ ಗಿಡದಲ್ಲಿ 1 ಕೋಟಿ ರೂಪಾಯಿ ಪತ್ತೆಯಾಗಿದೆಯಂತೆ.
ಕೆ.ಸುಬ್ರಹ್ಮಣ್ಯ ರೈ ಎಂಬುವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಗಾರ್ಡ್ ನಲ್ಲಿದ್ದ ಅಲಂಕಾರಿಕ ಗಿಡದ ಒಳಗೆ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿ ಒಂದು ಕೋಟಿ ರೂಪಾಯಿ ಇಟ್ಟಿರುವುದು ಪತ್ತೆಯಾಗಿದೆ. ಸುಮಾರು 20 ಅಧಿಕಾರಿಗಳು ದಾಳಿ ನಡೆಸಿದ್ದು, ಇಂದು ಸಹ ಅನೇಕ ಕಡೆ ದಾಳಿ ನಡೆಸಲಾಗಿದೆ.
ಮೈಸೂರಿನ ಪ್ರಸಿದ್ಧ ಸಿಹಿ ತಿಂಡಿ ತಯಾರಿಕರು, ಮಾರಾಟಗಾರರ ಅಂಗಡಿ, ಕಚೇರಿ, ರಿಯಲ್ ಎಸ್ಟೇಟ್ ಉದ್ಯಮ ನಡೆಸುವವರ ಮನೆಯ ಮೇಲೂ ಸಹ ದಾಳಿ ನಡೆಸಲಾಗಿದೆ.