ಪ್ರಜಾಸ್ತ್ರ ಸುದ್ದಿ
ಧಾರವಾಡ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ದಾಳಿ ನಡೆಸಿ ಅಕ್ರಮ ಹಣ ಸಂಪಾದನೆ ಆರೋಪ ಹೊತ್ತವರ ಮನೆ, ಕಚೇರಿ ತಪಾಸಣೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಪ್ತಾಪುರ ಏರಿಯಾದಲ್ಲಿರುವ ಪ್ರಶಾಂತ ಕೇಕರಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಇಂತಹ ಸಂದರ್ಭದಲ್ಲಿ ಇದೆಲ್ಲ ಸಹಜ ಎಂದು ಹೇಳಿದ ಪ್ರಶಾಂತ ಕೇಕರಿ ಮನೆ ಕೀ ಅಧಿಕಾರಿಗಳಿಗೆ ನೀಡಿದರು.