ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆಯಿಂದ ದಾಳಿ ಮಾಡಿಸಲಾಗುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ರೀತಿಯ ಐಟಿ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಯಾರ ಹತ್ತಿರವೇ ಬೇನಾಮಿ ಆಸ್ತಿ ಸಿಕ್ಕರೂ ಅದು ಕಾನೂನು ಪ್ರಕಾರ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಆದರೆ, ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿ ದಾಳಿ ಮಾಡಿಸಲಾಗುತ್ತಿದೆ. ಬಿಜೆಪಿಯವರ ಮನೆಗಳ ಮೇಲೆ ಐಟಿ ದಾಳಿಯಾದರೆ ಬೇನಾಮಿ ಆಸ್ತಿ ಸಿಗಬಹುದು ಎಂದರು.
ಮಾಜಿ ಸಿಎಂ ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮದಿನದ ಹಿನ್ನಲೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಕರ್ನಾಟಕ ಎಂದು ಮರುನಾಮಕರಣಗೊಂಡ ನಂತರ ಮೊದಲ ಮುಖ್ಯಮಂತ್ರಿಯಾದವರು ಎಸ್.ನಿಜಲಿಂಗಪ್ಪನವರು. ಸ್ವತಂತ್ರ ಹೋರಾಟಗಾರರಾಗಿದ್ದರು. ಗಾಂಧಿ, ವಿನೋಬಾ ಭಾವೆಯವರ ಆದರ್ಶಗಳನ್ನು ರೂಢಿಸಿಕೊಂಡಿದ್ದರು ಅಂತಾ ಹೇಳಿದರು.