‘ಫಾರೂಖ್ ಅಬ್ದುಲ್ಲಾ ದೇಶ ತೊರೆಯಬಹುದು’

216

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಭಾರತದಲ್ಲಿ ಉಸಿರುಗಟ್ಟಿಸುವಂತಹ ವಾತಾವರಣವಿದೆ ಅನ್ನೋದಾದರೆ ದೇಶ ತೊರೆಯಬಹುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾಗೆ ಆರ್ ಎಸ್ಎಸ್ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.

ಜಮ್ಮುವಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಂದ್ರೇಶ್ ಕುಮಾರ್, ಫಾರೂಖ್ ಅಬ್ದುಲ್ಲಾ ಹಿಂಸೆಯನ್ನು ಪ್ರೀತಿಸುತ್ತಾರೆ ಹೊರತು ಶಾಂತಿಯನ್ನಲ್ಲ. ದೇಶದ ಸಮಗ್ರತೆಯನ್ನು ಕಾಪಾಡುವಲ್ಲಿ ಜಮ್ಮು ಮತ್ತು ಕಾಶ್ಮೀರದ ಇಬ್ಬರು ನಾಯಕರು ಪ್ರಚೋದನಾತ್ಮಕ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಫಾರೂಖ್ ಹಾಗೂ ಮುಫ್ತಿ ವಿರುದ್ಧ ಹರಿಹಾಯ್ದರು.

ಕಳೆದ ಭಾನುವಾರ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ 116ನೇ ಜನ್ಮಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಫಾರೂಖ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಪಡೆಯಲು ಚೀನಾದ ನೆರವು ಪಡೆಯಲಾಗುತ್ತೆ ಎಂದು ವಿವಾದಾತ್ಮಕ ಹೇಳಿಕೆ ಹೇಳಿಕೆ ನೀಡಿದ್ದರು.




Leave a Reply

Your email address will not be published. Required fields are marked *

error: Content is protected !!