ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ನೀಡಿದೆ. ಆದರೆ, ಶೆಟ್ಟರ್ ಹೊರಗಿನವರು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಇದಕ್ಕೆ ಪ್ರತ್ಯುತ್ತರ ನೀಡಿರುವ ಶೆಟ್ಟರ್, ನನ್ನನ್ನು ಹೊರಗಿನವನು ಎಂದು ಕರೆಯುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದರು.
ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಸ್ಪರ್ಧಿಸಿದ್ದಾರೆ. ದೆಹಲಿಯ ಅಜಯ್ ಮಾಕನ್ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಾಂಗ್ರೆಸ್ ಆಯ್ಕೆ ಮಾಡಿದ್ದಾರೆ. ಇವರ್ಯಾರೂ ಕ್ಷೇತ್ರದಿಂದ ಹೊರಗಿನವರಲ್ಲವೇ ಎಂದರು.
ಜನಸಂಘದ ದಿನದಿಂದಲೂ ನನ್ನ ಕುಟುಂಬ ಬಿಜೆಪಿಯೊಂದಿಗೆ ಸಂಬಂಧಿದೆ. ಅಲ್ಪಾವಧಿಗೆ ಕಾಂಗ್ರೆಸ್ ಸೇರಿದ್ದೆ. ಬೆಳಗಾವಿಯಲ್ಲಿನ ಸಮಸ್ಯೆಗಳಿಗೆ ನಾಯಕರು ತೆರೆ ಎಳೆದಿದ್ದಾರೆ. ಗೆಲುವಿಗೆ ಸಿದ್ಧತೆ ನಡೆಸಲಾಗುತ್ತಿದೆ ಅಂತಾ ಹೇಳಿದರು.