ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇಂದು ಮರಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಕಾಂಗ್ರೆಸ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಈ ರೀತಿ ಹೇಳಿದ್ದಾರೆ.
ಬಿಜೆಪಿಯಲ್ಲಿ ಅವಮಾನ ಆಗಿದೆ. ಮತ್ತೆ ಅಲ್ಲಿಗೆ ಹೋಗಿಲ್ಲ ಎಂದು ಶೆಟ್ಟರ್ ಹೇಳಿದ್ದರು. ಅವರು ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟ ವಿಚಾರ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆ ತನಕ ನಾನು ಬಿಜೆಪಿಗೆ ಹೋಗಲ್ಲ ಎಂದಿದ್ದರು. ಯಾವ ಒತ್ತಡ ಇತ್ತೋ ಗೊತ್ತಿಲ್ಲ. ಅದು ಅವರ ಆತ್ಮಸಾಕ್ಷಿಗೆ ಬಿಟ್ಟಿದ್ದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿಗೆ ಯಾಕೆ ಬಂದರು. ಬಿಜೆಪಿಗೆ ವಾಪಸ್ ಯಾಕೆ ಹೋದರು ಅವರನ್ನೇ ಕೇಳಬೇಕು. ವೈಯಕ್ತಿಕವಾಗಿ ನನಗೆ ಸಂತೋಷವಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹೀಗೆ ಕಾಂಗ್ರೆಸ್ ನಾಯಕರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.