‘ಅವಮಾನ ಮಾಡಿದ ಪಕ್ಷಕ್ಕೆ ಹೋಗಲ್ಲೆಂದು ಅವರೆ ಹೇಳಿದ್ದಾರೆ’

122

ಪ್ರಜಾಸ್ತ್ರ ಸುದ್ದಿ

ಮೈಸೂರು: ಪಕ್ಷದಲ್ಲಿ ತಮಗೆ ಅವಮಾನವಾಗಿದೆ ಎಂದು ಹೇಳಿ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ವಾಪಸ್ ಬಿಜೆಪಿಗೆ ಬರುತ್ತಾರೆ ಎನ್ನಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನನಗೆ ಅವಮಾನ ಮಾಡಿರುವ ಪಕ್ಷಕ್ಕೆ ಹೋಗಲ್ಲ ಎಂದು ಹೇಳಿದ್ದಾರೆ ಅಲ್ವಾ ಎಂದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ನನಗೆ ಚೆನ್ನಾಗಿ ಗೊತ್ತಿದೆ. ಒಂದು ವೇಳೆ ಹೋದರೆ ಅವರ ಮನವೊಲಿಸಿ ಉಳಿಸಿಕೊಳ್ಳುವೆ ಎಂದಿದ್ದಾರೆ. ಆದರೆ, ಕಳೆದ ಎರಡ್ಮೂರು ದಿನಗಳಿಂದ ಶೆಟ್ಟರ್ ಬಿಜೆಪಿಗೆ ವಾಪಸ್ ಆಗುತ್ತಾರೆ ಎನ್ನುವುದು ಎಲ್ಲೆಡೆ ಹರಿದಾಡುತ್ತಿದೆ.




Leave a Reply

Your email address will not be published. Required fields are marked *

error: Content is protected !!