ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕಳೆದ ಎರಡ್ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಜೈನಮುನಿ ಕಮಕುಮಾರ ನಂದಿ ಮಹಾರಾಜರ ಮೃತದೇಹ ಇಂದು ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ತಾಲೂಕಿನ ಕಟಕಬಾವಿ ಹತ್ತಿರದ ಕೊಳವೆಬಾವಿಯಲ್ಲಿ ಪತ್ತೆಯಾಗಿದೆ.
ಆರೋಪಿಗಳನ್ನು ಮುನಿಯನ್ನು ಕೊಲೆ ಮಾಡಿದ ನಂತರ ತುಂಡು ತುಂಡಾಗಿ ಕತ್ತರಿಸಿ ಬಟ್ಟೆಯಲ್ಲಿ ಕಟ್ಟಿ ಕೊಳೆವೆಬಾವಿಯಲ್ಲಿ ಎಸೆದು, ಮೇಲೆ ಮಣ್ಣು ಹಾಕಿದ್ದರು. ಸುಮಾರು 10 ಗಂಟೆಗಳ ಕಾರ್ಯಾಚರಣೆ ನಡೆಸಿದ ಪೊಲೀಸರು ಮೃತದೇಹದ ಭಾಗಗಳನ್ನು ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಮುನಿಗಳ ಆಶ್ರಮ ಇರುವುದು ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ. ಅಲ್ಲಿ ಅವರನ್ನು ಕೊಲೆ ಮಾಡಿ ಇಲ್ಲಿಗೆ ತಂದು ಎಸೆಯಲಾಗಿದೆ ಎನ್ನಲಾಗುತ್ತಿದೆ. ಇದು ವೈಯಕ್ತಿಕ ಕಾರಣಕ್ಕೆ ನಡೆದ ಕೊಲೆ ಎಂದು ಶಂಕಿಸಲಾಗಿದೆ.