ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಚಿಕ್ಕೋಡಿಯ ಜೈನ ಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ಸದನದಲ್ಲಿ ಸೋಮವಾರ ಪಟ್ಟು ಹಿಡಿತು. ಈ ವೇಳೆ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ, ನಿಮ್ಮ ಕಾಲದಲ್ಲಿ ಇರುವ ಅಧಿಕಾರಿಗಳೇ ಈಗ್ಲೂ ಇದ್ದಾರೆ. ಇದರಲ್ಲಿ ರಾಜಕೀಯ ಮಾಡಬೇಡಿ ಎಂದರು.
ಉತ್ತಮ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದೆ. ಯಾವ ತಪ್ಪಿತಸ್ಥರಿಗೂ ತಪ್ಪಿಸಿಕೊಳ್ಳಲು ಅವಕಾಶವಿಲ್ಲ. ನಮ್ಮ ಮೇಲೆ ವಿಶ್ವಾಸವಿಟ್ಟು ಸಹಕಾರ ಕೊಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ ವಿಪಕ್ಷಗಳಿಗೆ ಹೇಳಿದರು.
ವಿಧಾನ ಪರಿಷತ್ತನಲ್ಲಿ ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ನಿಯಮ 59ರ ಅಡಿ ಚರ್ಚೆಗೆ ಅವಕಾಶ ಕೋರಿದ್ದರು. ಘಟನೆ ಕುರಿತು ಸುದೀರ್ಘವಾಗಿ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಈಗಾಗ್ಲೇ ಆರೋಪಿಗಳನ್ನು ಬಂಧಿಸಲಾಗಿದೆ. ನಮ್ಮ ಪೊಲೀಸರು ಸಮರ್ಥವಾಗಿದ್ದು, ಸೂಕ್ತ ತನಿಖೆ ನಡೆಸುತ್ತಾರೆ ಎಂದರು.