ಜಲಿಯನ್ ವಾಲಾಬಾಗ್ ಹತ್ಯಾಕಾಂಡ: ರಾಷ್ಟ್ರಪತಿ, ಪ್ರಧಾನಿ ನಮನ

54

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪಂಜಾಬಿನ ಅಮೃತಸರದ ಜಲಿಯನ್ ವಾಲಾಬಾಗ್ ನಲ್ಲಿ 1919, ಏಪ್ರಿಲ್ 13ರಂದು ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಅಂದಿನ ಬ್ರಿಟಿಷ್ ಸರ್ಕಾರದ ರೌಲತ್ ಕಾಯ್ದೆ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿ ಶಾಂತಿಯುತವಾಗಿ ಹೋರಾಟ ನಡೆಸಿದ್ದರು. ಈ ವೇಳೆ ಏಕಾಏಕಿ ಬ್ರಿಟಿಷರು ಗುಂಡಿನ ದಾಳಿ ನಡೆಸಿದ್ದರು. ಇದರಿಂದಾಗಿ ಸಾವಿರಾರು ಜನರು ಹುತಾತ್ಮರಾದರು.

ದೇಶಕ್ಕಾಗಿ ತಮ್ಮ ಪ್ರಾಣ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವದ ನಮನಗಳು. ನಿಮಗೆ ಇಡೀ ದೇಶ ಋಣಿಯಾಗಿರುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!