ಜಮೀನು ವಿಚಾರಕ್ಕೆ ಗಲಾಟೆ, 6 ಮಂದಿ ಆಸ್ಪತ್ರೆಗೆ ದಾಖಲು

142

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು 6 ಜನರು ಆಸ್ಪತ್ರೆಗೆ ದಾಖಲಾದ ಘಟನೆ ದೇವನಹಳ್ಳಿ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. 6 ಗುಂಟೆ ಜಮೀನು ವಿಚಾರವಾಗಿ ಮುನಿ ಆಂಜಿನಪ್ಪ ಹಾಗೂ ನಾರಾಯಣಸ್ವಾಮಿ ಎಂಬುವರ ನಡುವೆ ಗಲಾಟೆ ನಡೆದಿದೆ.

ದೇವನಹಳ್ಳಿ ಹತ್ತಿರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಿರುವುದರಿಂದ ಇಲ್ಲಿಯ ಜಮೀನುಗಳಿಗೆ ತುಂಬಾ ಬೇಡಿಕೆ ಇದೆ. ಹೀಗಾಗಿ ಒಂದಿಂಚು ಜಾಗಕ್ಕೂ ಜಗಳಗಳು ನಡೆಯುತ್ತವೆ. ಈಗ 6ಗಂಟೆ ಜಮೀನು ವಿಚಾರವಾಗಿ ಗಲಾಟೆ ಮಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!